ದೇಗುಲಗಳಲ್ಲಿ ಪೂಜೆ, ಪುನಸ್ಕಾರ ಬುಕ್ ಮಾಡಲು ವಿಶೇಷ ಆಪ್ ಬಿಡುಗಡೆ: ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಕ್ತಾದಿಗಳ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆನ್ ಲೈನ್ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮುಜರಾಯಿ ಇಲಾಖೆ ವ್ಯಾಪ್ತಿಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಎಲ್ಲಾ ದೇವಾಲಯಗಳ ಆವರಣಗಳನ್ನು ವ್ಯವಸ್ಥಿತವಾಗಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ ಮಾಡಲು ತಿಳಿಸಲಾಗಿದೆ ಎಂದರು.

ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ನಲ್ಲಿ ಬುಕ್ ಮಾಡಲು ವಿಶೇಷ ಆಪ್ ಬಿಡುಗಡೆ ಮಾಡಲಾಗುವುದು. ಭಕ್ತರ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದರು .

ಕಾಶಿ ಯಾತ್ರೆ, ಮಾನಸ ಸರೋವರ, ಚಾರ್ ಧಾಮ್ ಮತ್ತು ಭಾರತ್ ಗೌರವ್ ಕಾಶಿ ಯಾತ್ರೆಗೆ ಸಹಾಯ ಆಗಲು ಆಪ್ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!