ರಾಜಸ್ಥಾನ ಪೊಲೀಸರ ಕಾರ್ಯಾಚರಣೆ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಗಂಗಾಪುರ ನಗರದ ನಿವಾಸಿ ಮೊಹಮ್ಮದ್‌ ಮಿರಾಜುದ್ದೀನ್‌ (31) ಎಂಬಾತನನ್ನು ಪೊಲೀಸರ ವಿಶೇಷ ತಂಡವು ಬಂಧಿಸಿದೆ ಎಂದು ಎಡಿಜಿಪಿ ದಿನೇಶ್‌ ಎಂ.ಎನ್‌. ಶುಕ್ರವಾರ ತಿಳಿಸಿದರು.

ಈತನ ತಲೆಗೆ ₹25 ಸಾವಿರ ಬಹುಮಾನ ಘೋಷಿಸಲಾಗಿತ್ತು. ಮಿರಾಜುದ್ದೀನ್‌ನನ್ನು ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್‌) ವಶಕ್ಕೆ ನೀಡಲಾಗಿದೆ.

2014ರಲ್ಲಿ ದೇಶದಾದ್ಯಂತ ದಾಳಿ ನಡೆಸಲು ಭಯೋತ್ಪಾದಕರ ಗುಂಪು ಯೋಜನೆ ರೂಪಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ 13 ಮಂದಿ ಉಗ್ರರನ್ನು ಬಂಧಿಸಲಾಗಿತ್ತು. ಇವರಲ್ಲಿ 12 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ದಿನೇಶ್‌ ವಿವರಿಸಿದರು. ಈ ಪ್ರಕರಣದಲ್ಲಿ ಸಂಚು ರೂಪಿಸಿರುವ ಆರೋಪ ಮಿರಾಜುದ್ದೀನ್‌ ಮೇಲಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!