ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಯಶಸ್ವಿ ದಾಳಿ ಹಿನ್ನೆಲೆ ಬೆಂಗಳೂರಿನ ದೇವಾಲಯಗಳಲ್ಲಿ ಸೇನೆಗೆ ಒಳಿತಾಗಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆ ಮುಜರಾಯಿ ಇಲಾಖೆಯಡಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಯೋಧರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಕೆಗೆ ಆದೇಶ ನೀಡಲಾಗಿತ್ತು. ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರ ದೇವಾಲಯದಲ್ಲಿ ಸೈನ್ಯದ ಬಲವರ್ಧನೆಗೆ ಸೋಮಸುಂದರ್ ದೀಕ್ಷಿತ್ರ ನೇತೃತ್ವದಲ್ಲಿ ವಿಶೇಷ ದುರ್ಗಾ ಹೋಮ ಮಾಡಲಾಯಿತು.
ನಾಡಿಗೆ, ನಮ್ಮನ್ನ ರಕ್ಷಿಸುವ ಸೈನ್ಯಕ್ಕೆ ಬಲ ನೀಡು ತಾಯಿ ಎಂದು ದುರ್ಗಾ ಹೋಮ ಮಾಡಲಾಗಿದ್ದು, ದುರ್ಗಾ ಹೋಮದ ಜೊತೆಗೆ ವಿಶೇಷ ಪೂಜೆಗೆ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಶತ್ರುಗಳ ಸಂಹಾರದ ಜೊತೆಗೆ ಸೈನಿಕರ ಶಕ್ತಿಗಾಗಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ.