ವಿಶ್ವಕಪ್ ವಿಜಯಕ್ಕಾಗಿ ಕಲಬುರಗಿಯಲ್ಲಿ ವಿಶೇಷ ಪೂಜೆ, ಹೋಮ-ಹವನ

ಹೊಸದಿಗಂತ ವರದಿ ಕಲಬುರಗಿ:

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಭಾರತ ಗೆದ್ದು ವಿಜಯ ಸಾಧಿಸಲೆಂದು, ನಗರದ ಸ್ತಂಭ ರಾಮಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಹವನ ನಡೆಸಲಾಯಿತು.

ಹಿಂದೂ ಜಾಗೃತಿ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ್ ಸ್ವಾಧಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೇರಿ ವಿಶೇಷ ಪೂಜೆ ಸಲ್ಲಿಸಿ, ಬೃಹದಾಕಾರದ ವಿಶ್ವಕಪ್ ಚಿತ್ರ ಬಿಡಿಸಿ,‌ ಭಾರತ ತಂಡಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಹೇಶ್ ಕೇಂಭಾವಿ, ಸುರೇಶ್ ತಳವಾರ್, ಶಂಕರ ಚೌಕಾ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!