ಹೊಸದಿಗಂತ ಡಿಜಿಟಲ್ ಡೆಸ್ಕ್:
3,800ಕೋಟಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಕರಾವಳಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ವೇದಿಕೆಗೆ ಬಂದ ಪ್ರಧಾನಿಯವರಿಗೆ ಸಾಂಪ್ರದಾಯಿಕ ಕೊಡಗಿನ ಪೇಟ ಹಾಗೂ ಉಡುಪಿಯ ಶ್ರೀಕೃಷ್ಣ ಮಠದ ಕೃಷ್ಣನ ವಿಗ್ರಹ ನೀಡಿ ಸನ್ಮಾನಿಸಲಾಯಿತು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿಗೆ ಮಲ್ಲಿಗೆ ಹಾರ ಹಾಕಿ ಗೌರವ ಸೂಚಿಸಿದರು. ಜೊತಗೆ ಪರಶುರಾಮ ಪುತ್ಥಳಿಯನ್ನು ಉಡುಗೊರೆ ನೀಡಿದರು.
ಈ ವೇಳೆ ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಸಚಿವರು ಉಪಸ್ಥಿತರಿದ್ದರು.