ಕಪಿಲೇಶ್ವರ ದೇಗುಲದಲ್ಲಿ ಡಿಕೆಶಿ ವಿಶೇಷ ಪೂಜೆ, ಬೆಳಗಾವಿಗೆ ಬಂದರೂ ಜಾರಕಿಹೊಳಿ ಭೇಟಿ ಇಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಳಗಾಳಿಯಲ್ಲೇ ವಾಸ್ತವ್ಯ ಹೂಡಿದ್ದರೂ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ಮಾಡದಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಕಾಮಗಾರಿಗಳ ಉದ್ಘಾಟನೆ ನೆಪ ಹೇಳಿಕೊಂಡು ಸತೀಶ್ ಅವರು ಡಿಕೆ.ಶಿವಕುಮಾರ್ ಅವರ ಭೇಟಿಯನ್ನು ನಿಯಂತ್ರಿಸುತ್ತಿದ್ದು, ಈ ಮೂಲಕ ಮುನಿಸು ಹೊರಹಾಕುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ನಡುವೆ ಸತೀಶ್ ಜಾರಕಿಹೊಳಿ ಆಪ್ತ ವಲಯದಲ್ಲಿ ಕಾಣಿಸಿಕೊಂಡ ಶಾಸಕರು ದುಬೈ ಪ್ರವಾಸಕ್ಕೆ ಯೋಜನೆ ರೂಪಿಸಿದ್ದು, 4-5 ದಿನಗಳ ಕಾಲ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಡಿಕೆ ಶಿವಕುಮಾರ್ ಅವರು, ಭಾನುವಾರ ಸತೀಶ್ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಯಾರೆಲ್ಲಾ ಪ್ರವಾಸಕ್ಕೆ ಹೋಗುತ್ತಿದ್ದಾರೆಂಬುದರ ಕುರಿತು ಪ್ರಶ್ನೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!