ಅಂಜಲಿ ಘಟನೆ ಮರೆಯುವ ಮುನ್ನವೇ ಮತ್ತೊಂದು ದುರಂತ: ಮೂವರು ಯುವತಿಯರ ಮೇಲೆ ಹರಿದ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯಲ್ಲಿ 20 ವರ್ಷದ ಅಂಜಲಿ ಎಂಬ ಯುವತಿಯನ್ನು ಕಾರಿನೊಂದಿಗೆ 14 ಕಿಲೋಮೀಟರ್ ಎಳೆದೊಯ್ದ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಇದು ಮರೆಯುವ ಮುನ್ನವೇ ಮತ್ತೊಂದು ದುರಂತ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ದೆಹಲಿ ಮಾದರಿಯ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಮೂವರು ಯುವತಿಯರ ಮೇಲೆ ಹರಿದಿದೆ.

ಈ ಘಟನೆಯಲ್ಲಿ ಯುವತಿಯರು ಗಾಯಗೊಂಡಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೋರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಯುವತಿ ಕೈಲಾಶ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಮತ್ತೊಬ್ಬ ಯುವತಿ ಸ್ವೀಟಿ ಕುಮಾರಿ ಕೋಮಾಕ್ಕೆ ಹೋಗಿದ್ದಾರೆ. ಆಕೆಯ ಸಹೋದರ ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ನೆರವು ಕೋರಿ ಮನವಿ ಮಾಡಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂತ್ರಸ್ತರು ಮೂವರೂ ಬಿ.ಟೆಕ್ ಓದುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮೂವರಲ್ಲಿ ಸ್ವೀಟಿ ಕುಮಾರಿಯ ಸ್ಥಿತಿ ಚಿಂತಾಜನಕವಾಗಿದೆ. ಆಕೆಯ ತಲೆ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗ್ರೇಟರ್ ನೋಯ್ಡಾದ GNIOT ಕಾಲೇಜಿನಲ್ಲಿ ಮೂವರು ಯುವತಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!