ದ್ವೇಷದ ಭಾಷಣದ ಮೇಲೆ ಯಾವುದೇ ದೂರು ನೀಡದಿದ್ದರೂ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ: ಎಲ್ಲಾ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವೇಷದ ಭಾಷಣದ (Hate Speech) ಮೇಲೆ ಯಾವುದೇ ದೂರು ನೀಡದಿದ್ದರೂ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂಕೋರ್ಟ್ (Supreme Court) ಇಂದು ವಿಸ್ತರಿಸಿದೆ.

ಇದನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ದ್ವೇಷದ ಭಾಷಣವು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!