ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹತೋಟಿಗೆ ತರಲು ಮತ್ತೊಂದು ಅಸ್ತ್ರ ಪ್ರಯೋಗಿಸಲಾಗಿದ್ದು, ಪ್ರತಿಭಟನೆಗಳನ್ನು ಹತ್ತಿಕ್ಕಲು 36 ಗಂಟೆಗಳ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಧ್ಯಕ್ಷ ಗೊತಾಬಯ ರಾಜಪಕ್ಸೆ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಬಳಿಕವೂ ನಾಗರಿಕರು ಪ್ರತಿಭಟನೆ ಮುಂದುವರಿಸಿದ್ದರಿಂದ ಸೋಮವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಉಲ್ಲಂಘಿಸಿ ಪ್ರತಿಭಟನೆಗಿಳಿದರೆ ಕಠಿಣ ಸೆಕ್ಷನ್ ಅಡಿ ಬಂಧಿಸಲಾಗುವುದು ಎಂದು ಸರಕಾರ ಖಡಕ್ ಎಚ್ಚರಿಕೆ ನೀಡಿದೆ.
ಈ ನಡುವೆ ಅಧ್ಯಕ್ಷರ ನಿವಾಸದ ಎದುರು ಪ್ರತಿಭಟನೆ ಹಿಂಸಾರೂಪ ಪಡೆದಿರುವ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ ಎಂದು ಆರೋಪ ಕೇಳಿಬಂದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ