ಹೊಸದಿಗಂತ ವರದಿ, ಕಲಬುರಗಿ
ರಾಜ್ಯದಲ್ಲಿ ಮುಸಲ್ಮಾನರ ಅಟ್ಟಹಾಸ ಮಿತಿಮೀರಿದೆ. ಹಿಂದೂ ಯುವಕರ ಮೇಲೆ ಕೊಲೆ ಅಸ್ತ್ರವನ್ನು ನಿರಂತರವಾಗಿ ಬಳಸಲಾಗುತ್ತಿದೆ. ಮುಸ್ಲಿಂ ಸಮುದಾಯದ ಯುವತಿಯನ್ನು ಪ್ರೀತಿ ಮಾಡಿದ ಎಂಬ ಏಕೈಕ ಕಾರಣಕ್ಕೆ ದಲಿತ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 6 ತಿಂಗಳ ಹಿಂದೆಯೇ ಕೊಲೆಯಾದ ಯುವಕನಿಗೆ ಯುವತಿಯ ಸಹೋದರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ, ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಆರೋಪಿಸಿದ್ದಾರೆ.
ಜಿಲ್ಲೆಯ ವಾಡಿ ಪಟ್ಟಣದಲ್ಲಿ ಮೇ.25ರಂದು ನಡೆದ ದಲಿತ ಯುವಕನ ಕೊಲೆ ಪ್ರಕರಣದ ಕುರಿತು ಆಕ್ರೋಶ ಹೊರಹಾಕಿದರು.
ಆರೋಪಿಗಳು ಹೊಂಚುಹಾಕಿ ವಿಜಯಕುಮಾರ್ ಕಾಂಬಳೆ ನಡು ರಸ್ತೆಯಲ್ಲೇ ಕೊಲೆ ಮಾಡಿದ್ದಾರೆ. ಕರ್ನಾಟಕ ಮಾತ್ರವಲ್ಲ ದೇಶದಾದ್ಯಂತ ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಲವ್ ಜಿಹಾದ್ ಹೆಸರಿನಲ್ಲಿ ಅವರ ಬದುಕನ್ನು ಹಾಳು ಮಾಡುತ್ತಾರೆ.ಆದರೆ, ಹಿಂದೂ ಯುವಕರು ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದರೆ ಸಾಕು ಅವರನ್ನು ಹತ್ಯೆ ಮಾಡುತ್ತಾರೆ. ಹಿಂದೂಗಳು ಪ್ರೀತಿಗೆ ಪ್ರೀತಿ ಹರಿಸಿದರೆ, ಮುಸಲ್ಮಾನರು ಪ್ರೀತಿಗೆ ರಕ್ತವನ್ನು ಹರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ:
ಇತ್ತೀಚಿಗೆ ಚಿತ್ತಾಪುರ ತಾಲೂಕಿನಲ್ಲಿ ಹಿಂದೂ ಯುವಕರ ಹತ್ಯೆ ನಿರಂತರವಾಗಿ ನಡೆದಿದೆ. ಕಳೆದ ಮೂರು ವರ್ಷದಲ್ಲಿ ಚಿತ್ತಾಪುರ ತಾಲೂಕುವೊಂದರಲ್ಲಿಯೇ ಮೂರು ಜನ ಹಿಂದೂ ಯುವಕರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಷ್ಟಾದರೂ ಶಾಸಕ ಪ್ರಿಯಾಂಕ್ ಖರ್ಗೆ ಅವರು ಕೊಲೆ ಪ್ರಕರಣ ಖಂಡಿಸಿಲ್ಲ. ಕೊಲೆಯಾದ ಯುವಕರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಸಹ ಮಾಡಿಲ್ಲ. ಇಂತಹ ಶಾಸಕರು ನಮಗೆ ಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ.