ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ ಮಂಗಳೂರು/ಉಡುಪಿ: 

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮಂಗಳೂರು ಪೊಲೀಸರು ಶುಕ್ರವಾರ ಹೆಜಮಾಡಿ ಚೆಕ್ ಪೋಸ್ಟ್ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿಲ್ಲೆ ಪ್ರವೇಶಿಸದಂತೆ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಹೊರಡಿಸಿದ್ದರೂ ಮುತಾಲಿಕ್ ಆಗಮಿಸಿದ್ದರಿಂದ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಅವರನ್ನು ವಶಕ್ಕೆ ಪಡೆದು ವಾಪಾಸು ಕಳುಹಿಸಲಾಗಿದೆ.

ಜನತೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!