ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಿವಶ

ಹೊಸದಿಗಂತ ವರದಿ, ಬಾಗೇಪಲ್ಲಿ
ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರು ಹೃದಯಾಘಾತದಿಂದ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.
ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರಿಗೆ ಶುಕ್ರವಾರ ಬೆಳಗ್ಗೆ 4 ಗಂಟೆಗೆ ತೀವ್ರ ಹೃದಯಾಘಾತ ಸಂಬವಿಸಿದ್ದು,
ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ‌ ಚಿಕಿತ್ಸೆ ನೀಡಲಾಗಿದೆ. ಆದರೆ
ಚಿಕತ್ಸೆ ಫಲಿಸದ ಕಾರಣ ಮಾಜಿ ಶಾಸಕ ಜಿ.ವಿ.ಎಸ್ ಅವರು .7:28 ನಿಮಿಷಕ್ಕೆ ಮೃತಪಟ್ಟಿರುವುದಾಗಿ ಬಾಗೇಪಲ್ಲಿ ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಅವರಣದಲ್ಲಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.
ಸಂಜೆ ಅಂತಿಮ ಸಂಸ್ಕಾರ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!