ದಿಗಂತ ವರದಿ ವಿಜಯಪುರ:
ಪ್ರಸ್ತಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ಇಂಗ್ಲಿಷ್ ಮಾಧ್ಯಮದಲ್ಲಿ 625 ಕ್ಕೆ 625 ಅಂಕ ಪಡೆದು ವಿಶೇಷ ಸಾಧನೆ ತೋರಿದ್ದು, ವಿದ್ಯಾರ್ಥಿನಿಯ ಈ ಸಾಧನೆಗೆ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯ ಚೇರ್ಮನ್ ಎಂ.ಎಸ್. ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ದರ್ಶನಗೌಡ ಪಾಟೀಲ ಸೇರಿ ಶಾಲಾ ಆಡಳಿತ ಮಂಡಳಿ, ಕುಟುಂಬಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



