17 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡುವಂತೆ ಸ್ಟಾಲಿನ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿರುವ 17 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲು ಮಧ್ಯಪ್ರವೇಶಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಗಡಿಯಾಚೆ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಎರಡು ಮೀನುಗಾರಿಕಾ ದೋಣಿಗಳು ಮತ್ತು 17 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಎಂದು ಹೇಳಿದ್ದಾರೆ. ಅವರನ್ನು ಮನ್ನಾರ್ ಮತ್ತು ನೌಕಾ ಶಿಬಿರಕ್ಕೆ ಕರೆದೊಯ್ಯಲಾಗಿದ್ದು, ತನಿಖೆ ಮುಂದುವರಿದಿದೆ.

“24.12.2024 ರಂದು ಶ್ರೀಲಂಕಾ ನೌಕಾಪಡೆಯಿಂದ ರಾಮೇಶ್ವರಂನ 17 ಮೀನುಗಾರರನ್ನು ಮತ್ತು ಅವರ ಎರಡು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಂಧಿಸಿದ ಘಟನೆಯನ್ನು ನಿಮ್ಮ ತಕ್ಷಣದ ಗಮನಕ್ಕೆ ತರಲು ನಾನು ಬಯಸುತ್ತೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!