ಕಾಲ್ತುಳಿತ ಪ್ರಕರಣ: ತೀವ್ರಗೊಂಡ ಸಿಐಡಿ ವಿಚಾರಣೆ, ಬಂಧಿತರ ಕಸ್ಟಡಿಗೆ ಪಡೆಯಲು ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ವಿಶೇಷ ವಿಚಾರಣಾ ದಳ, ತನಿಖೆ ಇನ್ನಷ್ಟು ತೀವ್ರಗೊಳಿಸಿದೆ.
ಸಿಐಡಿ ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ಈಗಾಗಲೇ ಕಾಲ್ತುಳಿತ ಪ್ರಕರಣ ನಡೆದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕಚೇರಿಗೆ ಭೇಟಿ ನೀಡಿ, ಕಾಲ್ತುಳಿತ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ. ಈ ನಡುವೆ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಕೂಡಾ ಸಲ್ಲಿಸಲಾಗಿದ್ದು, ಸರ್ಕಾರಿ ರಜೆ, ಹಾಗೂ ಭಾನುವಾರವಾಗಿರುವ ಕಾರಣ ಸೋಮವಾರ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಸಿಐಡಿ ತಂಡ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!