ಕಾಲ್ತುಳಿತ ಕೇಸ್‌ | ಹೈಕಮಾಂಡ್ ಬುಲಾವ್, ದೆಹಲಿಗೆ ತೆರಳಿದ ಸಿಎಂ, ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿನ್ನಸ್ವಾಮಿ ಕಾಲ್ತುಳಿತ  ಪ್ರಕರಣ ಸಂಬಂಧ ಹೈಕಮಾಂಡ್ ಬುಲಾವ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್  ದೆಹಲಿಗೆ ತೆರಳಿದ್ದಾರೆ.

ಹೈಕಮಾಂಡ್ ಬುಲಾವ್ ಹಿನ್ನೆಲೆ ಡಿಕೆಶಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತಮ್ಮ ನಿವಾಸದಿಂದ ತೆರಳಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ಕಾವೇರಿ ನಿವಾಸದಿಂದ ದೆಹಲಿ ಕಡೆ ಪಯಣ ಬೆಳೆಸಿದ್ದಾರೆ. ಒಟ್ಟಿಗೆ ಒಂದೇ ವಿಮಾನದಲ್ಲಿ ಸಿಎಂ ಹಾಗೂ ಡಿಕೆಶಿ ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ತೆರಳಿರುವ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ. ಭೇಟಿ ವೇಳೆ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ವರದಿ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!