‘ಪುಷ್ಪ 2′ ಶೋ ವೇಳೆ ಕಾಲ್ತುಳಿತ: 9 ವರ್ಷದ ಬಾಲಕನ ಬ್ರೈನ್ ಡೆಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಸಾವನಪ್ಪಿದ ಮಹಿಳೆಯ 9 ವರ್ಷದ ಮಗ ಶ್ರೀತೇಜಾಗೆ ಬ್ರೈನ್‌ ಡೆಡ್ ಆಗಿದ್ದು, ಇದರಿಂದ ಅಲ್ಲು ಅರ್ಜುನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಈ ಕುರಿತು ಹೈದ್ರಾಬಾದ್ ಸಿಟಿ ಪೊಲೀಸ್ ಕಮಿಷನರ್ ಸಿ.ವಿ ಆನಂದ್ ಮಾಹಿತಿ ನೀಡಿದ್ದಾರೆ.

ಬಾಲಕ ದಾಖಲಾಗಿದ್ದ ಕಿಮ್ಸ್‌ ಆಸ್ಪತ್ರೆಗೆ ಇಂದು(ಡಿ.18) ಪೊಲೀಸ್‌ ಕಮಿಷನರ್‌ ಭೇಟಿ ನೀಡಿದ್ದರು. ಬಳಿಕ ಈ ಕುರಿತು ಪೊಲೀಸ್ ಕಮಿಷನರ್ ಮಾತನಾಡಿ, ಕಾಲ್ತುಳಿತದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕ ಶ್ರೀತೇಜ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಇದೀಗ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ. ಸದ್ಯ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ದೀರ್ಘಾವಧಿಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀತೇಜಾ ಅವರ ಆರೋಗ್ಯದ ಕುರಿತು ಶೀಘ್ರದಲ್ಲೇ ವೈದ್ಯಕೀಯ ಬುಲೆಟಿನ್ ಅನ್ನು ಸಹ ವೈದ್ಯರು ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

‘ಪುಷ್ಪ 2’ ರಿಲೀಸ್ ವೇಳೆ, ಕಾಲ್ತುಳಿತಕ್ಕೆ ಮೃತ ರೇವತಿ ಪುತ್ರ ಶ್ರೀತೇಜಾ ಕೂಡ ತೀವ್ರ ಗಾಯಗೊಂಡಿದ್ದ, ಈ ಹಿನ್ನೆಲೆ ತುರ್ತು ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಬಾಲಕನ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇದರಿಂದ ಅಲ್ಲು ಅರ್ಜುನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುದ ಸಾಧ್ಯತೆ ಇದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!