ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ.. 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಪುರಿಯಲ್ಲಿ ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡು 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ವಿಳಂಭವಾಗಿತ್ತು. ಇದರಿಂದ ರಥಯಾತ್ರೆ ಮಾರ್ಗದ ತಿರುವಿನಲ್ಲಿ ತೊಂದರೆ ಉಂಟಾಗಿತ್ತು. ಈ ವೇಳೆ ರಥ ನಿಂತಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಹೇಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!