ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಪ್ಲಾಟ್‌ಫಾರ್ಮ್ ಟಿಕೆಟ್ ಬಂದ್, ಹೈ ಸೆಕ್ಯುರಿಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ಬಳಿಕ ರೈಲ್ವೇ ಆಡಳಿತವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೌಂಟರ್‌ನಿಂದ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟವನ್ನು ನಿಲ್ಲಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಿದೆ.

ಎರಡು ದಿನಗಳ ಹಿಂದೆ ದೆಹಲಿ ರೈಲು ನಿಲ್ದಾಣದಲ್ಲಿ ಜನಸಂದಣಿಯಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು. ಘಟನೆಯ ನಂತರ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಲ್ದಾಣದ ಆವರಣದಲ್ಲಿ ಭದ್ರತಾ ಪಡೆಗಳ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ಭದ್ರತೆಯಲ್ಲಿ ತೊಡಗಿರುವ ಸಿಐಎಸ್‌ಎಫ್ ಕಂಪನಿಯನ್ನು ರೈಲ್ವೇ ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮಾತನಾಡಿ, ದೆಹಲಿ ರೈಲು ನಿಲ್ದಾಣದ ಭದ್ರತೆಗಾಗಿ ಎಂಟು ಕಂಪನಿಗಳ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ 80 ಸಿಬ್ಬಂದಿಯನ್ನು ಒಳಗೊಂಡ ಮೆಟ್ರೋ ಪೊಲೀಸ್ ಕಂಪನಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೆಟ್ರೋದಿಂದ ಮೂವರು ಇನ್ಸ್ಪೆಕ್ಟರ್‌ಗಳು ಮತ್ತು ಒಬ್ಬ ಎಸಿಪಿಯನ್ನು ನಿಯೋಜಿಸಲಾಗಿದೆ. ರೈಲ್ವೇ ಪೊಲೀಸ್ ಮತ್ತು ಜಿಆರ್‌ಪಿಯ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಂಟರಿಂದ ಹತ್ತು ರೈಲ್ವೇ ಪೊಲೀಸ್ ಠಾಣೆಗಳ ಮುಖ್ಯಸ್ಥರನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸ್ ಠಾಣೆ ಮುಖ್ಯಸ್ಥರನ್ನು ಸಹ ಹತ್ತಿರದಲ್ಲೇ ನಿಯೋಜಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!