ಹೊಸದಿಗಂತ ಡಿಜಿಟಲ್ ಡೆಸ್ಕ್:
2022ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡುತ್ತಿದೆ.
ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಯಂತ್ರೋಪಕರಣ ಖರೀದಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ.
ಕೃಷಿ ಕ್ಷೇತ್ರಕ್ಕೆ 33700 ಕೋಟಿ ರೂ. ಘೋಷಣೆ ಮಾಡುವ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ಇನ್ನು ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಸ್ಥಾಪಿಸಲು 50 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದರು.
ಉಳಿದಂತೆ ರೈತರ ಆದಾಯ ಹೆಚ್ಚುಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗುತ್ತದೆ. ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪಿಸಲಿದ್ದು, 1 ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷು ಪದ್ಧತಿ ಸಾರಜನಕ ಸ್ಥಿರೀಕರಣಗೊಳ್ಳಲಿದೆ.