ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಕೃಷಿ ಭಾಗ್ಯ ಯೋಜನೆಗೆ ಒತ್ತು ನೀಡಿದ್ದಾರೆ.
ಕೃಷಿ ಭಾಗ್ಯ ಯೋಜನೆಯನ್ನು ಮತ್ತಷ್ಟು ವಿಸ್ತರಣೆಗೊಳಿಸಿದ್ದು, ಸುಮಾರು 100 ಕೋಟಿ ಅನುದಾನ ಮೀಸಲಿಡುವುದಾಗಿ ಘೋಷಿಸಿದ್ದಾರೆ.
ಈ ವೇಳೆ ನವೋದ್ಯಮ ಕಾರ್ಯಕ್ರಮಕ್ಕೆ 10 ಕೋಟಿ ರೂ. ಮತ್ತು ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡಿಂಗ್ ಮಾಡಲು ಯೋಜಿಸಿದ್ದೇವೆ. ಕೃಷಿ ಯಂತ್ರಧಾರೆ ಯೋಜನೆ ಮುಂದುವರಿಕೆಯಾಗಲಿದೆ. 300 ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಯ ಜತೆಗೆ 100 ಹಬ್ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ ಮೀಸಲು ಎಂದು ತಿಳಿಸಿದರು.