ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.