ಸಂಸತ್ತು ಅಂಗೀಕರಿಸಿದ ಕಾನೂನನ್ನು ರಾಜ್ಯ ತಡೆಯಲು ಸಾಧ್ಯವಿಲ್ಲ: ಕಿರಣ್‌ ರಿಜಿಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ. ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಗಳನ್ನು ರಕ್ಷಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಈ ಹಿಂದೆ ಹೇಳಿದ್ದರು. ಬ್ಯಾನರ್ಜಿ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು, ಸಂಸತ್ತು ಅಂಗೀಕರಿಸಿದ ಕಾನೂನನ್ನು ರಾಜ್ಯವು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಾವು ಒಕ್ಕೂಟ ರಚನೆಯಡಿಯಲ್ಲಿ ಕೆಲಸ ಮಾಡುತ್ತೇವೆ. ಅವರು ಸೈದ್ಧಾಂತಿಕವಾಗಿ ಕಾಯ್ದೆಯನ್ನು ವಿರೋಧಿಸಬಹುದು. ಆದರೆ, ಸಂಸತ್ತು ಅಂಗೀಕರಿಸಿದ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ವೋಟ್‌ಬ್ಯಾಂಕ್‌ ತುಷ್ಟೀಕರಣದಲ್ಲಿ ತೊಡಗಿರುವ ಕೆಲವು ರಾಜಕಾರಣಿಗಳು, ವಕ್ಫ್‌ ಕಾಯ್ದೆಯಿಂದ ಮುಸ್ಲಿಮರು ತಮ್ಮ ಮಸೀದಿಗಳನ್ನು ಕಳೆದುಕೊಳ್ಳುತ್ತಾರೆ ಮತ್ತು ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂಬ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!