ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರು ಮತ್ತು ಹಸಿದವರ ಪಾಲಿಗೆ ಅನ್ನಕೇಂದ್ರವಾಗಿದ್ದ ಇಂದಿರಾ ಕ್ಯಾಂಟೀನ್ ಅನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್ಪುರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈಗ ಇರುವ ಕ್ಯಾಂಟೀನ್ ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಮಾಡಲಾಗಿತ್ತು. ಇದೀಗ 243 ಸ್ಥಳಗಳಲ್ಲೂ ಕ್ಯಾಂಟೀನ್ ಆರಂಭಿಸುತ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟಿನ್ ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡಲಾಗುತ್ತದೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ ಟೆಂಡರ್, ಗುತ್ತಿಗೆದಾರರಿಗೆ ಹಳೇ ಪೇಮೆಂಟ್ ಮಾಡಲಾಗುವುದು ಎಂದು ಜಯರಾಂ ರಾಯ್ಪುರ ಹೇಳಿದರು.