ಕೆಐಒಸಿಎಲ್‌ ಅದಿರು ಅನ್ವೇಷಣೆಗೆ ಅಸ್ತು ಎಂದ ರಾಜ್ಯ ಸರ್ಕಾರ : ಅನುಮಾನಕ್ಕೆ ಕಾರಣವಾಗಿದೆ ಈ ನಿಲುವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತುಂಬರಗುಡ್ಡಿ ರಾಜ್ಯ ಅರಣ್ಯದಲ್ಲಿ ಕಬ್ಬಿಣದ ಹಾಗೂ ಮ್ಯಾಂಗನೀಸ್‌ ಅದಿರು ಅನ್ವೇಷಣೆ ನಡೆಸಲು ಕೆಐಒಸಿಎಲ್‌ ಕಂಪನಿಗೆ ಕರ್ನಾಟಕ ಸರ್ಕಾರ ಅಸ್ತು ಎಂದಿದೆ.

ಸಂಡೂರಿನ ದೇವದಾರಿಯಲ್ಲಿ ಈ ಕಂಪನಿಗೆ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕೇಂದ್ರ ಉಕ್ಕು ಸಚಿವಾಲಯ ಕಳೆದ ವರ್ಷ ಅನುಮತಿ ನೀಡಿತ್ತು. ಆದರೆ, ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಈಗ ಕೆಐಒಸಿಎಲ್‌ ವಿಷಯದಲ್ಲಿ ರಾಜ್ಯ ಸರ್ಕಾರ ನಿಲುವು ಬದಲಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಈ ಕಂಪನಿಯು ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಕೊಳವೆ ಮಾರ್ಗ ಅಳವಡಿಸುವುದೂ ಸೇರಿ 465.73 ಹೆಕ್ಟೇರ್‌ ಪ್ರದೇಶವನ್ನು ಅನುಮತಿ ಇಲ್ಲದೇ ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡಿದೆ. ಎನ್‌ಪಿವಿ ಶುಲ್ಕ ₹628 ಕೋಟಿ ಹಾಗೂ ಬಡ್ಡಿ ಸೇರಿ ಒಟ್ಟಾರೆ ₹3,000 ಕೋಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಡಬೇಕಾಗಿದೆ. ಈ ಎಲ್ಲ ನಿಬಂಧನೆಗಳನ್ನು ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದರು.

ಕೆಐಒಸಿಎಲ್‌ ಈ ಮೊತ್ತ ಪಾವತಿಸದೇ ಇದ್ದರೂ ಗಣಿ ಅನ್ವೇಷಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!