ಹೊಸದಿಗಂತ ವರದಿ ,ಶಿವಮೊಗ್ಗ:
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಜ. 7 ರಿಂದ 9ರವರೆಗೆ ನಗರದಲ್ಲಿ ನಡೆಯಲಿದ್ದುಘಿ, ಈ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಹಳ ವರ್ಷಗಳ ಬಳಿಕ ಜಿಲ್ಲೆಗೆ ಈ ಅವಕಾಶ ಸಿಕ್ಕಿದ್ದು, ಇದನ್ನು ಸುಗಮವಾಗಿ ನಡೆಸಲಾಗುತ್ತದೆ. ಬರುವ ಎಲ್ಲಾ ಮಕ್ಕಳು, ಶಿಕ್ಷಕರು ಹಾಗೂ ತೀರ್ಪುಗಾರರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ವಿವಿಧ ಸಮಿತಿಗಳನ್ನು ಮಾಡಲಾಗಿದೆ ಎಂದರು.
ಡಿವಿಎಸ್ ಕಾಲೇಜಿನ 27 ಸಮಾನಾಂತರ ವೇದಿಕೆಗಳಲ್ಲಿ ಹಾಗೂ ರಂಗಮಂದಿರದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ 1375ಕ್ಕೂ ಹೆಚ್ಚಿನ ರ್ಸ್ಪಗಳು ಆಗಮಿಸಲಿದ್ದಾರೆ. ವಿವಿಧ ರೀತಿಯ 23 ವೈಯಕ್ತಿಕ ವಿಭಾಗಗಳಲ್ಲಿ ಹಾಗೂ 3 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಮಿಥುನ್ ಕುಮಾರ್, ಜಿಪಂ ಸಿಇಓ ಎಂ.ಡಿ. ಪ್ರಕಾಶ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ, ಸತೀಶ್ ಇದ್ದರು.