ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಮಟ್ಟದ ವ್ಹೀಲ್ ಚೇರ್ ಟೆನಿಸ್ ಪಂದ್ಯಾವಳಿ-2024ರಲ್ಲಿ ಪ್ರತಿಮಾ ಎನ್ ರಾವ್ ಮತ್ತು ಶೇಖರ್ ವೀರಸ್ವಾಮಿ ಅವರು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕರ್ನಾಟಕ ವೀಲ್ ಚೇರ್ ಟೆನಿಸ್ ಅಸೋಸಿಯೇಷನ್ (ಕೆಡಬ್ಲ್ಯೂಟಿಎ) ಅ.26 ಮತ್ತು 27ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಎಸ್ ಎಲ್ ಟಿಎ ಟೆನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 59 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.
3 ವರ್ಷದ ಮಗುವಿದ್ದಾಗಲೇ ಪೊಲಿಯೋಗೆ ಒಳಗಾದ ಪ್ರತಿಮಾ ಅವರು, ಕ್ರೀಡೆಯಲ್ಲಿ ಪಾಲ್ಗೊಂಡು ಈ ವರೆಗೂ 15 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಅಪಘಾತದಲ್ಲಿ ಕಾಲು ಕಳೆದುಕೊಂಡ ಶೇಖರ್ ಅವರು ವ್ಹೀಲ್ ಚೇರ್ ಟೆನಿಸ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.