SPORTS | ರಾಜ್ಯ ಮಟ್ಟದ ವ್ಹೀಲ್ ಚೇರ್ ಟೆನಿಸ್: ಪ್ರತಿಮಾ-ಶೇಖರ್ ವಿನ್ನರ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯಮಟ್ಟದ ವ್ಹೀಲ್ ಚೇರ್ ಟೆನಿಸ್ ಪಂದ್ಯಾವಳಿ-2024ರಲ್ಲಿ ಪ್ರತಿಮಾ ಎನ್ ರಾವ್ ಮತ್ತು ಶೇಖರ್ ವೀರಸ್ವಾಮಿ ಅವರು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಕರ್ನಾಟಕ ವೀಲ್ ಚೇರ್ ಟೆನಿಸ್ ಅಸೋಸಿಯೇಷನ್ (ಕೆಡಬ್ಲ್ಯೂಟಿಎ) ಅ.26 ಮತ್ತು 27ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಎಸ್ ಎಲ್ ಟಿಎ ಟೆನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 59 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.

3 ವರ್ಷದ ಮಗುವಿದ್ದಾಗಲೇ ಪೊಲಿಯೋಗೆ ಒಳಗಾದ ಪ್ರತಿಮಾ ಅವರು, ಕ್ರೀಡೆಯಲ್ಲಿ ಪಾಲ್ಗೊಂಡು ಈ ವರೆಗೂ 15 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಅಪಘಾತದಲ್ಲಿ ಕಾಲು ಕಳೆದುಕೊಂಡ ಶೇಖರ್ ಅವರು ವ್ಹೀಲ್ ಚೇರ್ ಟೆನಿಸ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!