ಕಾಂಗ್ರೆಸ್ ವಿರುದ್ಧ ಹೇಳಿಕೆ: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಗೆ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಮುಖ್ಯಸ್ಥ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೇಂದ್ರ ಚುನಾವಣಾ ಆಯೋಗ(ಇಸಿಐ) ನೊಟೀಸ್ ಜಾರಿ ಮಾಡಿದೆ.

ನೊಟೀಸ್ ನ ಪ್ರಕಾರ, ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ”ಲಟ್ಖೋರ್” ಮತ್ತು ”ಚವಾಟಾ ದಡ್ಡಮಾಸ್” ಮತ್ತು ನಿಷ್ಪ್ರಯೋಜಕ ಫೆಲೋಗಳು ಎಂದು ಕರೆದ ಬಗ್ಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ ಚಂದ್ರಶೇಖರ್ ರಾವ್ ಅವರಿಗೆ ಸೂಚಿಸಿದೆ.

ಕೆಸಿಆರ್ ಅವರು ನಿಗದಿತ ಸಮಯದೊಳಗೆ ಪ್ರತಿಕ್ರಿಯೆ ಸಲ್ಲಿಸದಿದ್ದರೆ ಯಾವುದೇ ಹೆಚ್ಚಿನ ಉಲ್ಲೇಖವನ್ನು ನೀಡದೆ ಈ ವಿಷಯದಲ್ಲಿ ಸೂಕ್ತ ಕ್ರಮ ಅಥವಾ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!