ಹೊಸ ದಿಗಂತ ವರದಿ, ಕಲಬುರಗಿ:
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾನು ದಿನಾಂಕ ಇತೀಚೆಗೆ ಮೇ.೨೪ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹಾಗೂ ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್ ರವಿಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಲಬುರಗಿ ಜಿಲ್ಲಾಧಿಕಾರಿ ಅವರು ಅತ್ಯಂತ ಗೌರವಪಾತ್ರರು.ಅವರ ವೃತ್ತಿಪರ ಸಾಮರ್ಥ್ಯ ಮತ್ತು ಪ್ರಾಮಾಣಿಕತೆಯ ಬಗ್ಗೆ ನನಗೆ ಯಾವುದೇ ಅಪವಾದವಿಲ್ಲ. ಅಂದು ನೀಡಿದ ಹೇಳಿಕೆಯು ಉದ್ದೇಶಪೂರ್ವಕವಾಗಿಯು ನೀಡಿಲ್ಲ.ಬಾಯಿ ತಪ್ಪಿನಿಂದ ಆ ಹೇಳಿಕೆ ಬಂದಿದ್ದು,ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳ ಸೇವಾ ಮನೋಭಾವನೆ, ಸರ್ಕಾರಿ ಸೇವೆಯ ಬಗ್ಗೆ ನಾನು ಗೌರವ ನೀಡುತ್ತೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.