ಪ್ರಧಾನಿ ಮೋದಿ ಕುರಿತು ಹೇಳಿಕೆ: ಲಾಲು ಪ್ರಸಾದ್ ಯಾದವ್ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಹಿಂದು ಅಲ್ಲ ಎಂಬ ಹೇಳಿಕೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಂಕಷ್ಟ ಎದುರಾಗಿದ್ದು, ಲಾಲು ವಿರುದ್ಧ ಪಾಟ್ನಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ರಾಜ್ಯ ವಕ್ತಾರ ಕೃಷ್ಣ ಸಿಂಗ್ ಅವರು ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಗಾಂಧಿ ಮೈದಾನ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೀತಾರಾಮ್ ಕುಮಾರ್, ನಾವು ಲಾಲು ಪ್ರಸಾದ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಮತ್ತು ಈ ವಿಷಯವು ತನಿಖೆಯಲ್ಲಿದೆ ಎಂದು ಹೇಳಿದ್ದಾರೆ.

ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಜನವಿಶ್ವಾಸ್ ರ್ಯಾಲಿಯಲ್ಲಿ ಮಾತನಾಡಿದ ಲಾಲು ಪ್ರಸಾದ್ ಯಾದವ್, ಅವರಿಗೆ ಏಕೆ ಮಕ್ಕಳಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಅವರು ಮಕ್ಕಳನ್ನು ಹೊಂದಿರುವವರ ಮೇಲೆ ದಾಳಿ ಮಾಡುತ್ತಿದ್ದಾರೆ. ಜನರು ಕುಟುಂಬಕ್ಕಾಗಿ ಹೋರಾಡುತ್ತಿದ್ದಾರೆ. ನಿಮಗೆ ಕುಟುಂಬವಿಲ್ಲ. ಪ್ರಧಾನಿ ಮೋದಿಯವರ ತಾಯಿ ಸತ್ತಾಗ, ಅವರು ಗಡ್ಡವನ್ನು ಏಕೆ ಬೋಳಿಸಲಿಲ್ಲ? ಅವರು ಹಿಂದೂ ಅಲ್ಲ. ಹಿಂದುಗಳು ತಾಯಿ ಅಥವಾ ತಂದೆಯರು ಸತ್ತಾಗ, ಆಚರಣೆಯ ಪ್ರಕಾರ, ಅವರು ತಲೆ ಮತ್ತು ಗಡ್ಡವನ್ನು ಬೋಳಿಸುತ್ತಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!