June 21, 2026
Sunday, June 21, 2026
spot_img

ಕೇಂದ್ರದ ಮೇಲೆ ರಾಜ್ಯದ ಫೋಕಸ್: ಹೆಚ್ಚುವರಿ ಅನುದಾನಕ್ಕೆ ದೆಹಲಿಯಲ್ಲಿ ವಿಶೇಷ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಮತ್ತು ಅನುದಾನಗಳನ್ನು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸೆಳೆಯುವ ಉದ್ದೇಶದಿಂದ ದೆಹಲಿಯಲ್ಲಿ ವಿಶೇಷ ಘಟಕ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ನೆರವು ತರುವ ನಿಟ್ಟಿನಲ್ಲಿ ಈ ಕ್ರಮ ಮಹತ್ವ ಪಡೆದುಕೊಂಡಿದೆ.

ಅನುದಾನ ಅವಕಾಶಗಳ ಮೇಲೆ ವಿಶೇಷ ಗಮನ

ಇತರೆ ರಾಜ್ಯಗಳು ಕೇಂದ್ರದಿಂದ ಪಡೆಯುತ್ತಿರುವ ನೆರವು ಮತ್ತು ಯೋಜನೆಗಳ ಮಾದರಿಯನ್ನು ಅಧ್ಯಯನ ಮಾಡಿ, ಕರ್ನಾಟಕಕ್ಕೂ ಹೆಚ್ಚಿನ ಲಾಭ ದೊರಕುವಂತೆ ಕಾರ್ಯತಂತ್ರ ರೂಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಪ್ರತ್ಯೇಕ ತಂಡ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ:

ನಿವೃತ್ತ ಅಧಿಕಾರಿಗಳ ಸೇವೆ

ಕೇಂದ್ರದ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಹಾಗೂ ಯೋಜನೆಗಳ ಮಾಹಿತಿ ಸಂಗ್ರಹಿಸಲು ಐದು ಅಥವಾ ಆರು ಮಂದಿ ನಿವೃತ್ತ ಹಿರಿಯ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಕಾನೂನು ವ್ಯವಹಾರಗಳಿಗೆ ಪ್ರತ್ಯೇಕ ಘಟಕ

ಸುಪ್ರೀಂ ಕೋರ್ಟ್ ಸೇರಿದಂತೆ ದೆಹಲಿಯಲ್ಲಿ ನಡೆಯುವ ರಾಜ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪ್ರತ್ಯೇಕ ಕಾನೂನು ವಿಭಾಗ ಸ್ಥಾಪಿಸಲು ಸಹ ನಿರ್ಧರಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !