ಬಿಜೆಪಿ ವತಿಯಿಂದ ರಾಜ್ಯಾದ್ಯಂತ ವನಮಹೋತ್ಸವ; ಸಸಿ ನೆಟ್ಟು ನೀರೆರೆದ ರಾಜ್ಯಾಧ್ಯಕ್ಷ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರು:  ಪರಿಸರವನ್ನು ಉಳಿಸಿ, ಬೆಳೆಸಿ, ರಕ್ಷಿಸುವುದು ಇಂದಿನ ತುರ್ತು ಅಗತ್ಯಗಳಲ್ಲೊಂದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿಯು ವಿಶ್ವ ಪರಿಸರ ದಿನದಂದು ರಾಜ್ಯಾದ್ಯಂತ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಈ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸಸಿಗಳನ್ನು ನೆಟ್ಟು ನೀರೆರೆದರು.
ಪರಿಸರದ ಬಗ್ಗೆ ಕಾಳಜಿಯನ್ನು ಹೆಚ್ಚಿಸಿ, ಅರಣ್ಯ, ಮರಗಿಡ ಹಾಗೂ ಪಶುಪಕ್ಷಿ ಸಂಕುಲವನ್ನು ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಪ್ರತಿಯೊಬ್ಬ ನಾಗರಿಕರು ಕಾರ್ಯಪ್ರವೃತ್ತರಾಗಬೇಕು. ಈ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕೆಂದು ಅವರು ಈ ವೇಳೆ ಕರೆ ನೀಡಿದರು.
ʼಕರ್ನಾಟಕ ರಾಜ್ಯದಲ್ಲಿ ಜೂನ್ 5 ರಿಂದ 1 ತಿಂಗಳ ಕಾಲ ಎಲ್ಲಾ ಜಿಲ್ಲೆ, ಮಂಡಲ, ಬೂತ್‍ಗಳಲ್ಲಿ ಸಂಸದರು, ಶಾಸಕರು, ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರನ್ನು ಒಳಗೊಂಡಂತೆ ಸಸಿ ನೆಡುವ ಕಾರ್ಯಕ್ರಮವನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದೆʼ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲೆ ಮತ್ತು ಮಲ್ಲೇಶ್ವರ ಮಂಡಲದ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!