ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಕಟ್ಟಿದ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ʻಪ್ರಗತಿಯ ಪ್ರತಿಮೆʼ ಇಂದು ಪ್ರಧಾನಿ ಮೋದಿ ಕೈಯಿಂದ ಅನಾವರಣಗೊಂಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾಪರ್ಣೆಗೊಂಡಿದೆ. ಅನಾವರಣಕ್ಕೂ ಮುನ್ನವೇ ‘ವಿಶ್ವ ಬುಕ್ ಆಫ್ ರೆಕಾರ್ಡ್ಸ್’ ಸೇರಿದ ಈ ಕಂಚಿನ ಪ್ರತಿಮೆಯನ್ನು ಬೆಂಗಳೂರು ನಗರದ ಬೆಳವಣಿಗೆಗೆ ಕಾರಣರಾದ ಕೆಂಪೇಗೌಡರ ಕೊಡುಗೆಯನ್ನು ಸ್ಮರಿಸಲು ನಿರ್ಮಿಸಲಾಗಿದೆ.