ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ಸಚಿವ ಬೋಸರಾಜು

ಹೊಸದಿಂಗತ ವರದಿ,ಮಡಿಕೇರಿ:

ಜಿಲ್ಲೆಯಲ್ಲಿ ಮುಂಗಾರು ಎದುರಿಸಲು ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕಾಡಾನೆ ಹಾವಳಿ ನಿಯಂತ್ರಣ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು‌ ಹೇಳಿದರು.
ನಗರದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಬಜೆಟ್ ಆರಂಭಕ್ಕೂ ಮೊದಲು ಜಿಲ್ಲೆಗೆ ಆಗಮಿಸಿ ಕೆಡಿಪಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಮಡಿಕೇರಿ ನಗರಕ್ಕೆ ಕುಡಿಯುವ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!