ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಲಾಗುವುದು, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಯಾಗಿದೆ ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!