ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಕ್ಕಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ರೈಲಿನ ಕಿಟಕಿಯ ಗಾಜಿಗೆ ಹಾನಿಯಾಗಿತ್ತು.
ಈ ಇಬ್ಬರು ಮಕ್ಕಳು ದಾವಣಗೆರೆಯ ಎಸ್ಎಸ್ ನಗರ ಹಾಗೂ ಭಾಷಾ ನಗರದವರು ಎಂದು ತಿಳಿದು ಬಂದಿದೆ. ಕಲ್ಲೆಸೆದ ನಂತರ ಇಬ್ಬರು ಪರಾರಿಯಾಗಿದ್ದರು.
ಸದ್ಯ ದಾವಣಗೆರೆ ರೈಲ್ವೆ ಪೊಲೀಸರು ಇಬ್ಬರು ಮಕ್ಕಳನ್ನು ಚಿತ್ರದುರ್ಗದ ಬಾಲಮಂದಿರದಲ್ಲಿ ಇರಿಸಿದ್ದಾರೆ. ಈ ಘಟನೆಯ ಕುರಿತು ರೈಲ್ವೆ ಆರ್ಪಿಎಫ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.