ಪುತ್ತೂರು ಬೊಳುವಾರಿನಲ್ಲಿ ಬಸ್‌ಗೆ ಕಲ್ಲೆಸೆತ: ಎಲ್ಲೆಡೆ ಇನ್ನಷ್ಟು ಬಿಗಿ ಬಂದೋಬಸ್ತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಾರೆಯಲ್ಲಿ‌ ನಡೆದ ಬಿಜೆಪಿ ಯುವ ಮುಖಂಡನ ಹತ್ಯೆ ಬೆನ್ನಿಗೆ ಪುತ್ತೂರಿನ ಬೊಳುವಾರಿನಲ್ಲಿ ಅಹಿತಕರ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಬಸ್ ವೊಂದಕ್ಕೆ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ.

ಪುತ್ತೂರು – ಮಂಗಳೂರು ನಡುವೆ ಸಂಚರಿಸುವ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಬಸ್ ನ ಗಾಜು ಪುಡಿಯಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದುತ್ವ ಪರ ಸಂಘಟನೆಗಳು ಇಂದು ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಿದ್ದವು.

ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುವಲ್ಲಿ ಮಾತ್ರ ಕಾರ್ಯಾಚರಿಸುತ್ತಿದೆ. ಬಂದ್ ಕರೆಯ ಹಿನ್ನೆಲೆಯಲ್ಲಿ ಪುತ್ತೂರಿನ ವಿವಿಧ ಶಿಕ್ಷಣ ಸಂಸ್ಥೆಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!