ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದಿದ್ದಾರೆ.
ಟಿಕೆ ಲೇಔಟ್ನಲ್ಲಿರುವ ಸಿಎಂ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದಿದ್ದು, ಪೊಲೀಸರು ಸ್ವಲ್ಪವೇ ಸಮಯದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಸತ್ಯಮೂರ್ತಿ ಎಂಬಾತ ಸಿಎಂ ಮನೆಗೆ ಕಲ್ಲು ಎಸೆದಿದ್ದ, ಈತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈತ ಸಿಎಂ ಮೈಸೂರಿನ ನಿವಾಸದಲ್ಲಿ ಇದ್ದ ವೇಳೆ ಮನೆಗೆ ಬಂದಿದ್ದು, ಮನೆಯ ಮುಂದೆ ನಿಂತು ಸೆಲ್ಫಿ ವಿಡಿಯೋ ಮಾಡಿದ್ದ. ಈತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.