ಗಣಿನಾಡಿನಲ್ಲಿ ಘರ್ಷಣೆ: ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮುಂದುವರೆದಿದೆ. ಮತದಾನದ ವೇಳೆ ಬಳ್ಳಾರಿ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ.  ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಜೀವರಾಯನಕೋಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿದ್ದು, ಈ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಚುನಾವಣೆಗೂ ಮುನ್ನ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಉಮೇಶ್ ಯಾದವ್ ಗಾಯಗೊಂಡಿದ್ದಾರೆ. ಮತದಾನದ ಹಕ್ಕು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ದ ಉಮೇಶ್ ಅವರನ್ನು ಬಿಜೆಪಿ ಕಾರ್ಯಕರ್ತರು ತಡೆದರು. ಇದು ವಾಗ್ವಾದಕ್ಕೆ ಕಾರಣವಾಗಿ ಹಲ್ಲೆ ನಡೆಸಿದ್ದಾರೆ. ಉಮೇಶ್ ಮೇಲೆ ಹಲ್ಲೆಯಾಗುತ್ತಿರುವ ವಿಷಯ ತಿಳಿದ ಹಲವು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಹಲ್ಲೆಯಿಂದ ಉಮೇಶ್ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!