ಹಳೇ ವೈಷಮ್ಯಕ್ಕೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ: 6 ಮಂದಿಗೆ ಗಾಯ

ದಿಗಂತ ವರದಿ ವಿಜಯಪುರ:

ಹಳೇ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದ್ದು, 6 ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಈ ಕಲ್ಲು ತೂರಾಟದ ಘರ್ಷಣೆಯಲ್ಲಿ ಗಾಯಗೊಂಡ ಐದು ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಲಖು ಮಾಡಲಾಗಿದೆ. ಘಟನೆಯಲ್ಲಿ ಮನೆ, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದರಿಂದ ಐದು ಬೈಕ್, ಒಂದು ಕ್ರೂಜರ್, ಎರಡು ತ್ರಿಚಕ್ರ ವಾಹನ ಜಖಂಗೊಂಡಿವೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!