ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಈಗ ಹೇಗಿದೆ ಪರಿಸ್ಥಿತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ಪಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಾಗಿಗುಡ್ಡದಲ್ಲಿ ಸೆಕ್ಷನ್ 144ಜಾರಿ ಮಾಡಲಾಗಿದೆ. ಶಾಂತಿನಗರದ ರಾಗಿಗುಡ್ಡದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಭೇಟಿ ನೀಡಿತ್ತು. ಪರಿಸ್ಥಿತಿ ಹತೋಟಿಕೆ ಬಂದಿದ್ದರೂ, ಬೂದಿ ಮುಚ್ಚಿದ ಕೆಂಡದಂತಿದೆ.ಮತ್ತೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಗಲಾಟೆ ವೇಳೆ ಸಿಲುಕಿದ್ದ ಏಳು ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ರಾಗಿಗುಡ್ಡದಲ್ಲಿ ಟಿಪ್ಪು ಕಟೌಟ್ ಅಳವಡಿಸಲಾಗಿದೆ. ಅದರಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನೆಲೆ ಪೊಲೀಸರು ಬಿಳಿ ಬಣ್ಣ ಬಳಿದಿದ್ದರು. ಇದರಿಂದಾಗಿ ಗಲಭೆ ಆರಂಭವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!