ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ಜೀರೋ ಸಿನಿಮಾ ಚಿತ್ರೀಕರಣ ವೇಳೆ ನಟ ಇಮ್ರಾನ್ ಹಶ್ಮಿಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ಸುದ್ದಿಯಾಗಿತ್ತು. ಆದರೆ, ಈ ಸುದ್ದಿಯನ್ನು ನಟ ಇಮ್ರಾನ್ ಹಶ್ಮಿ ನಿರಾಕರಿಸಿದ್ದಾರೆ.
The people of Kashmir have been very warm and welcoming, it has been an absolute joy shooting in Srinagar and Pahalgam. The news of me being injured in a stone pelting incident is inaccurate .
— Emraan Hashmi (@emraanhashmi) September 20, 2022
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮಾರುಕಟ್ಟೆಯಲ್ಲಿ ನಟ ಇಮ್ರಾನ್ ಹಶ್ಮಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಲಾಗಿದೆ ಎಂಬ ವರದಿಗಳು ಸೋಮವಾರ ವೈರಲ್ ಆಗಿವೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಇಮ್ರಾನ್, ಕಲ್ಲು ತೂರಾಟದ ಘಟನೆಯಲ್ಲಿ ಗಾಯಗೊಂಡಿರುವುದನ್ನು ನಿರಾಕರಿಸಿದ್ದಾರೆ.
ವರದಿಗಳಿಗೆ ಕುರಿತು ಇಮ್ರಾನ್ ಹಶ್ಮಿ ಟ್ವೀಟ್ ಮಾಡಿದ್ದು, ಕಾಶ್ಮೀರಿ ಜನರು ನಮ್ಮನ್ನು ಸ್ವಾಗತಿಸುತ್ತಿದ್ದಾರೆ. ಶ್ರೀನಗರ ಮತ್ತು ಪಹಲ್ಗಾಮ್ನಲ್ಲಿ ನಡೆಯುತ್ತಿರುವ ಗ್ರೌಂಡ್ ಜೀರೋ ಚಿತ್ರೀಕರಣ ಆನಂದಿಸುತ್ತಿದ್ದಾರೆ. ನಿನ್ನೆ ಕಲ್ಲು ತೂರಾಟವಾಗಿದೆ ಎಂಬ ತಪ್ಪು ಮಾಹಿತಿ ಹರಡಿದೆ ಎಂದು ನಟ ಹೇಳಿದರು.