ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಇಂದು ಪಿಎಫ್ಐ ಕಚೇರಿಗಳ ಮೇಲೆಎನ್ಐಎ ನಡೆಸಿರುವ ದಾಳಿಯನ್ನು ಖಂಡಿಸಿ ಕಾರ್ಯಕರ್ತರು ಹರತಾಳ (ಪ್ರತಿಭಟನೆ) ನಡೆಸಿದ್ದು, ಈ ವೇಳೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ವೇಳೆ ಇದರಿಂದ ತಪ್ಪಿಸಿಕೊಳ್ಳಲು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೊಬ್ಬ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಪಿಎಫ್ಐ ಕಾರ್ಯಕರ್ತರು ಹರತಾಳ ಹೆಸರಿನಲ್ಲಿ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಅಲ್ಲದೇ ಕಲ್ಲು ತೂರಾಟದಲ್ಲಿ ಅನೇಕ ಕೆಎಸ್ಆರ್ಟಿಸಿ ಬಸ್ಗಳಿಗೆ ಹಾನಿಗೊಳಿಸಿದ್ದಾರೆ. ಈ ವೇಳೆಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಲು ಮುಂದಾದ ಚಾಲಕ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿದ್ದು, ಹಲವರು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಎರ್ನಾಕುಲಂ ಜಿಲ್ಲೆಯ ಆಲುವಾ ಗ್ಯಾರೇಜ್, ಮರಂಪಲ್ಲಿ ಮತ್ತು ಪಕಲೋಮಟ್ಟಂನಲ್ಲಿ ವ್ಯಾಪಕ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ.