ಹೊಸದಿಗಂತ ಡಿಜಿಟಲ್ ಡೆಸ್ಕ್ :
ಆಂದ್ರದಲ್ಲಿ ಬುಧವಾರ ರಾತ್ರಿ ನಡೆದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಸಂಬಂಧ ವಿಶಾಖಪಟ್ಟಣಂ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬುಧವಾರ ರಾತ್ರಿ ಆರೋಪಿಗಳು ಹೊಚ್ಚಹೊಸ ಹೈಸ್ಪೀಡ್ ರೈಲಿನ ಕೋಚ್ ಒಂದರ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿಗಳನ್ನು ಒಡೆದು ಹಾಕಿದ್ದರು. ಕಲ್ಲು ತೂರಾಟದಿಂದಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ಕೋಚ್ನ ವಿಂಡ್ಶೀಲ್ಡ್ ಹಾನಿಯಾಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನೂಪ್ ಕುಮಾರ್ ಸತ್ಪತಿ ತಿಳಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಗುರುವಾರದಂದು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಘಟನೆ ನಡೆದ ದಿನದಂದು ಮದ್ಯಪಾನ ಮಾಡಿದ್ದರು. ಆದ್ದರಿಂದ ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.
ಮೂವರು ಆರೋಪಿಗಳ ವಿರುದ್ಧ ರೈಲ್ವೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಪ್ರಕರಣದ ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.