ವಿದ್ಯುತ್ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿದ್ಯುತ್ ದರ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಾಸಕ ಎಸ್.ಎನ್‌.ಚನ್ನಬಸಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ಕೈಗೊಳ್ಳಲಾಗಿತ್ತು. ಆದರೆ ಈ ವೇಳೆ ಕಿಡಿಗೇಡಿಗಳು ಮೆಸ್ಕಾಂ ಕಚೇರಿಗೆ ಕಲ್ಲು ತೂರಿ ಕಿಟಕಿ ಗಾಜು ಒಡೆದು ಹಾಕಿದ್ದಾರೆ.

ವಿದ್ಯುತ್ ದರ ಏರಿಕೆಯ ವಿರುದ್ಧ ಬಿಜೆಪಿಯಿಂದ ಇಲ್ಲಿನ ರೈಲು ನಿಲ್ದಾಣದ ಬಳಿಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪುಕ್ಕಟ್ಟೆ ಭಾಗ್ಯ ಕೊಡುತ್ತೀನಿ ಎಂದು ಅಧಿಕಾರಕ್ಕೆ ಬಂದಿದ್ದು, ಹಿಂಬಾಗಿಲ ಮೂಲಕ ದರ ಏರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದ ಪ್ರತಿಭಟನಾಕಾರರು ಮೆಸ್ಕಾಂ ಪ್ರವೇಶ ದ್ವಾರಕ್ಕೆ ನುಗ್ಗಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ತಳ್ಳಾಟದ ವೇಳೆ ಕೆಲವು ಕಿಡಿಗೇಡಿಗಳು ಮೆಸ್ಕಾಂ ಕಚೇರಿಗೆ ಕಲ್ಕು ತೂರಿದ್ದಾರೆ. ಆಗ ಮೆಸ್ಕಾಂ ಕಚೇರಿಯ ಕಿಟಕಿ ಗಾಜು ಪುಡಿಯಾಗಿದೆ.

ಸ್ಥಳದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ. ಪೊಲೀಸರು ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ್ದಾರೆ. ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮುರುಗೇಶ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!