ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೊಮ್ಮೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ರೂರ್ಕೆಲಾ-ಭುವನೇಶ್ವರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಭಾನುವಾರ ಕಲ್ಲುಗಳಿಂದ ದಾಳಿ ಮಾಡಿದ್ದು, ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.
ಈ ಘಟನೆಯು ರಾಜ್ಯದ ಧೆಂಕನಲ್-ಅಂಗುಲ್ ರೈಲ್ವೆ ವಿಭಾಗದ ಮೆರಮಂಡಲಿ ಮತ್ತು ಬುಧಪಾಂಕ್ ನಡುವೆ ನಡೆದಿರುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದರು.
ಘಟನೆಯಲ್ಲಿ ರೈಲಿನ ಎಕ್ಸಿಕ್ಯೂಟಿವ್ ಕ್ಲಾಸ್ ಕೋಚ್ನ ಗಾಜುಗಳಿಗೆ ಹಾನಿಯಾಗಿದ್ದು, ಕರ್ತವ್ಯದಲ್ಲಿದ್ದ ಆರ್ಪಿಎಫ್ ಎಸ್ಕಾರ್ಟಿಂಗ್ ಸಿಬ್ಬಂದಿ ಘಟನೆಯ ಬಗ್ಗೆ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಘಟನೆಯ ಕುರಿತು ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೂರ್ವ ಕರಾವಳಿ ರೈಲ್ವೆ ವಲಯದ ಭದ್ರತಾ ವಿಭಾಗ ಸ್ಥಳೀಯ ಪೊಲೀಸರೊಂದಿಗೆ ಜಂಟಿಯಾಗಿ ಆರೋಪಿಗಳನ್ನು ಗುರುತಿಸುವಲ್ಲಿ ಮಗ್ನರಾಗಿದ್ದಾರೆ.