ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದ್ದಂತೆಯೇ ಭಾರತದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿ, ಅದು ಸಾಧ್ಯವಾಗದಿದ್ದರೆ ಯಾತ್ರೆಯನ್ನು ರದ್ದುಗೊಳಿಸಿ ಎಂದು ಕೇಂದ್ರ ಸರ್ಕಾರ ರಾಹುಲ್ ಗಾಂಧಿಗೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ರಾಹುಲ್ ಗಾಂಧಿಗೆ ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಕಟ್ಟುನಿಟ್ಟಾಗಿ ಕ್ರಮಗಳನ್ನು ಪಾಲನೆ ಮಾಡಬೇಕು, ಅದು ಸಾಧ್ಯವಾಗದಿದ್ದರೆ ಜನರ ಹಿತಾಸಕ್ತಿಯನ್ನು ಗಮನಿಸಿ ಯಾತ್ರೆ ರದ್ದು ಮಾಡಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.