ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶಂಭು ಗಡಿಯಿಂದ ದೆಹಲಿಗೆ ತಮ್ಮ ‘ದಿಲ್ಲಿ ಚಲೋ’ ಮೆರವಣಿಗೆಯನ್ನು ಪ್ರಾರಂಭಿಸಿದಾಗ ಹರಿಯಾಣ ಪೊಲೀಸರು ಸಿಡಿಸಿದ ಅಶ್ರುವಾಯು ಪ್ರಯೋಗದಿಂದ ಕೆಲ ಪ್ರತಿಭಟನಾಕಾರರು ಗಾಯಗೊಂಡ ಘಟನೆ ನಡೆಯಿದ್ದು, ಇದರಿಂದ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈತ ನಾಯಕರೊಬ್ಬರು ಶುಕ್ರವಾರ ಸಂಜೆ ತಿಳಿಸಿದ್ದಾರೆ.
ಕೆಲ ರೈತರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಜಾಥವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.
ಹರಿಯಾಣ ಭದ್ರತಾ ಸಿಬ್ಬಂದಿ ಸಿಡಿಸಿದ ಅಶ್ರುವಾಯು ಪ್ರಯೋಗದಿಂದ ಐದರಿಂದ ಆರು ರೈತರು ಗಾಯಗೊಂಡಿದ್ದಾರೆ ಎಂದು ರೈತ ನಾಯಕರು ತಿಳಿಸಿದ್ದಾರೆ. 101 ರೈತರಿಂದ ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ದೆಹಲಿಯತ್ತ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಆದರೆ, ಸ್ವಲ್ಪ ದೂರ ಸಾಗುತ್ತಿದ್ದಂತೆ ಬ್ಯಾರಿಕೇಡ್ ಸರ್ಪಗಾವಲಿನ ಮೂಲಕ ಅವರನ್ನು ತಡೆಯಲಾಯಿತು.
ರೈತರು ಬ್ಯಾರಿಕೇಡ್ಗಳ ಬಳಿ ತಲುಪುತ್ತಿದ್ದಂತೆ ಅವರನ್ನು ಚದುರಿಸಲು ಹರಿಯಾಣ ಭದ್ರತಾ ಸಿಬ್ಬಂದಿ ಅಶ್ರುವಾಯು ಸಿಡಿಸಿದರು.ಇದರಿಂದ ಕೆಲವು ರೈತರಿಗೆ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪ್ರತಿಭಟನಾಕಾರರು ಹೇಳಿದರು.
ಹರಿಯಾಣ ಸರ್ಕಾರವು ನಿಷೇಧಾಜ್ಞೆಗಳನ್ನು ವಿಧಿಸಿದೆ ಮತ್ತು ಅಂಬಾಲಾ ಜಿಲ್ಲೆಯ 11 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಮುಂದಿನ ವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.