ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಂಕ್ರಾಂತಿ ಹಬ್ಬಕ್ಕೆ ಹೆಚ್ಚಿನ ಮಂದಿ ಹಣ್ಣು ತರಕಾರಿಗಳನ್ನು ಖರೀದಿ ಮಾಡ್ತಾರೆ, ಆದರೆ ಈಗ ನಮ್ಮನ್ನು ತೆರವು ಮಾಡಿದ್ರೆ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ ಎಂದು ವ್ಯಾಪಾರಿಗಳು ಕಣ್ಣೀರಿಟ್ಟಿದ್ದಾರೆ.
ಇನ್ನು ಮೂರು ದಿನಗಳ ಅವಕಾಶ ನೀಡಿ ಸಾಕು, ನಂತರ ತೆರವು ಮಾಡಿ ಎಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಬಿಬಿಎಂಪಿ ಹಾಗೂ ಸ್ಥಳೀಯ ಶಾಸಕ ಸಿ.ಕೆ ರಾಮಮೂರ್ತಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಡವಾಳ ಹಾಕಿ ಹಣ್ಣು ತರಕಾರಿ ಹೂವುಗಳನ್ನು ತಂದಿಟ್ಟಿದ್ದೇವೆ. ಆದರೆ ಮಾರೋದಕ್ಕೆ ಅವಕಾಶ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ಮಾಡಿಕೊಡಿ ಎಂದು ಪ್ರತಿಭಟನಾನಿರತರು ಹೇಳಿದ್ದಾರೆ.